ಬೆಂಗಳೂರು

ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ  ಸ್ಥಳೀಯ ಸಸ್ತನಿ ಪ್ರಭೇದವಾದ ಸಿಂಗಳೀಕ (ಲಯನ್-ಟೈಲ್ಡ್ ಮಕಾಕ್.) [ಚಿತ್ರ ಕೃಪೆ: ಗಣೇಶ್ ರಘುನಾಥನ್]

ಎಚ್ಚರಿಕೆ: ಈ ಲೇಖನವು, ಕೆಲವು ಓದುಗರಿಗೆ ಕಿರಿಕಿರಿಯೆನಿಸಬಹುದಾದ ಗಾಯಗೊಂಡ ಪ್ರಾಣಿಗಳ ಚಿತ್ರಗಳನ್ನು ಒಳಗೊಂಡಿದೆ.

ಬೆಂಗಳೂರು

ಹಸಿರು ಹುಲ್ಲುಗಾವಲುಗಳ, ಹೆಚ್ಚು ಸಮೃದ್ಧವಾಗಿರುವ ಆವಾಸಸ್ಥಾನಗಳ ಹುಡುಕಾಟದಲ್ಲಿ ಪ್ರಾಣಿಪಕ್ಷಿಗಳು, ಕಡಿಮೆ ಅನುಕೂಲಕರ ವಾತಾವರಣವನ್ನು ತೊರೆದು ಹೊರಡುತ್ತವೆ. ಸೆರೆಂಗೆಟಿಯ ಮಹಾ ವಲಸೆ, ಚಳಿಗಾಲದಲ್ಲಿ ಉಷ್ಣವಲಯದ ಕಡೆಗೆ ಸಾಗುವ ಪಕ್ಷಿಗಳು ಮತ್ತು ಬೆಳೆಗಳನ್ನು ನುಂಗಿ ಸ್ವಾಹಾ ಮಾಡಲು ದಾಳಿಯಿಡುವ ಲಕ್ಷಾಂತರ ಮಿಡತೆಗಳ ಹಿಂಡು - ಇವೆಲ್ಲಾ ಅಂತಹ ಚಲನೆಗೆ ಕೆಲವು ಉದಾಹರಣೆಗಳು. ಪರಿಚಿತ ಸ್ಥಳಗಳಿಗೆ ವಲಸೆ ಹೋಗುವುದು ಸುಲಭ; ಆದರೆ, ಅಪರಿಚಿತ ಪ್ರದೇಶಗಳಿಗೆ ದಾಂಗುಡಿ ಇಟ್ಟು, ನೆಲೆಗೊಳ್ಳುವುದು ಸವಾಲೇ ಸರಿ. ವಿಕಾಸದ ಹಾದಿಯಲ್ಲಿ, ಪ್ರಾಣಿಪಕ್ಷಿಕೀಟಗಳ ನಡವಳಿಕೆ ಮತ್ತು ಬದುಕುಳಿಯುವ ಸಾಧ್ಯತೆಗಳು, ಇಂತಹ ಸವಾಲುಗಳೊಂದಿಗೆ ಜೂಜುವುದರ ಮೂಲಕವೇ ರೂಪುಗೊಳ್ಳುತ್ತದೆ. ಬೆಂಗಳೂರಿನ ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ ಮತ್ತು ಸಾಸ್ತ್ರಾ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಹೊಸ ಅಧ್ಯಯನವೊಂದರಲ್ಲಿ,  ಚಿಟ್ಟೆಗಳ ವಲಸೆಯ ಪ್ರಕ್ರಿಯೆಯಲ್ಲಿ ಇಂತಹ ಯಾವ ವಹಿವಾಟು ನಡೆಯುತ್ತದೆ ಎಂಬುದನ್ನು ಕಂಡುಕೊಂಡಿದ್ದಾರೆ.

 

ಬೆಂಗಳೂರು

ಮೊಟ್ಟೆಯೊಂದಿಗೆ ಜೋಡಿ ಕ್ರೆಸ್ಟೆಡ್ ಟ್ರೀಸ್ವಿಫ್ಟ್ಗಳು [ಚಿತ್ರ: ಆದಿತ್ಯ ಪಾಲ್ / ಸಿಸಿ ಬೈ-ಎಸ್‌ಎ 4.0]

ಮನುಷ್ಯರು ಹೇಗೆ ತಮ್ಮ ಮಕ್ಕಳನ್ನು ಪೋಷಿಸಿ ದೊಡ್ಡವರನ್ನಾಗಿ ಮಾಡುತ್ತಾರೊ ಹಾಗೆಯೇ ಪ್ರಾಣಿಗಳಲ್ಲೂ ಈ ಗುಣವನ್ನು ಕಾಣಬಹುದು. ಅನೇಕ ಪ್ರಭೇದಗಳಲ್ಲಿ ಮನುಷ್ಯರಂತೆಯೇ ಪ್ರಾಣಿಗಳು ತಮ್ಮ ಮರಿಗಳ ಉತ್ತಮ ಬೆಳೆವಣಿಗೆಗೆ ಮತ್ತು ಸುರಕ್ಷೆತೆಗೆ ಅಗತ್ಯವಾದ ವಿವಿಧ ಸೌಲಭ್ಯಗಳನ್ನು ಒದಗಿಸುತ್ತವೆ. ಆಹಾರ ನೀಡುವುದು, ಗೂಡು ಕಟ್ಟುವುದು, ಕಾವು ಕೂರುವುದು, ಪರಭಕ್ಷರಿಂದ ರಕ್ಷಿಸುವುದು, ಬದುಕಲು ಅಗತ್ಯವಿರುವ ಪಾಠ ಹೇಳಿಕೊಡುವುದು ಇತ್ಯಾದಿ ಪ್ರಾಣಿಗಳಲ್ಲಿ ಕಂಡುಬರುವ ಪೋಷಣೆಯ ಕೆಲವು ವಿಧಾನಗಳಾಗಿವೆ.

ಬೆಂಗಳೂರು

ಏಷ್ಯಾದ ಮರಿಯಾನೆಯು ತನ್ನ ಬಾಯಿಯ ಬಲಭಾಗದಲ್ಲಿ ಹುಲ್ಲು ಇರಿಸಿಕೊಳ್ಳುತ್ತಿರುವುದು [ಚಿತ್ರ ಕೃಪೆ: ಟಿ. ರೇವತಿ]

ಬೆಂಗಳೂರು

ಪಂಜಾಬ್ ನಲ್ಲಿ ಚಳಿಗಾಲವು ಪ್ರಾರಂಭವಾಗುತ್ತಿದ್ದಂತೆ, ಲಕ್ಷಾಂತರ ಹೆಕ್ಟೇರ್ ಭತ್ತದ ಗದ್ದೆಗಳಲ್ಲಿ ಭತ್ತವನ್ನು ಕೊಯ್ಲು ಮಾಡುವ ನೂರಾರು ಯಂತ್ರಗಳ ಸದ್ದನ್ನು ಕೇಳಬಹುದು. ಇನ್ನು, ಮಹಾರಾಷ್ಟ್ರದಲ್ಲಿನ ವಿದರ್ಭದ ಹಳ್ಳಿಗಳು ತಮ್ಮ ಹಿಮದಷ್ಟು ಬಿಳಿಯ ಹತ್ತಿರಾಶಿಯನ್ನು ಲೆಕ್ಕವಿಲ್ಲದಷ್ಟು ಮೂಟೆಗಳಲ್ಲಿ ತುಂಬಿ  ಮಾರುಕಟ್ಟೆಗೆ ಕಳಿಸುತ್ತಿರುತ್ತವೆ. ಹಲವು ವರ್ಷಗಳ ಹಿಂದೆ, ಇದೇ ಕೃಷಿಭೂಮಿಗಳು ವಿಸ್ತಾರವಾದ ಕಾಡುಗಳು, ಹುಲ್ಲುಗಾವಲುಗಳು, ಗದ್ದೆಗಳು ಮತ್ತು ಅನೇಕ ಬೆಳೆಗಳನ್ನುಆವರ್ತಿಯ ಆಧಾರದ ಮೇಲೆ ಬೆಳೆಸಲಾಗುವಂತಹ ಪ್ರದೇಶಗಳಾಗಿದ್ದವು.

ಬೆಂಗಳೂರು

ಇಲ್ಲೊಂದು ಚಿಲಿಪಿಲಿ, ಅಲ್ಲೊಂದು ವಾಹನದ ಹಾರ್ನ್! ಕೀಟಗಳ ಕಿರುಗುಡುವಿಕೆ,  ನಾಯಿಯ ಬೊಗಳುವಿಕೆ, ಚರ್ಚ್‌ನ ಗಂಟೆ ಮತ್ತು ವಿವಿಧ ಪಕ್ಷಿಗಳ ಕಲರವ -  ನಗರದಲ್ಲಿ ಇವೆಲ್ಲವೂ ಒಟ್ಟೊಟಿಗೆ ಕೇಳಿಸಬಹುದಾಗಿದ್ದು, ಇದೇ ಕಾರಣದಿಂದಲೇ ನಗರದಲ್ಲಿ ಪಕ್ಷಿಯಾಗಿ ಬದುಕುವುದು ಕಠಿಣಕಾರ್ಯ!. ಈ ಗಡಿಬಿಡಿಯ ಗಲಗಲದಲ್ಲಿ, ಸಂಗಾತಿಗೆ ಪಕ್ಷಿಯ ಕರೆ ಕೇಳಿಸುವುದು ಅಸಾಧ್ಯ! ಹಾಗಾಗಿ ಇಂತಹ ಸಮಸ್ಯೆಗಳನ್ನು ತಪ್ಪಿಸಲು, ನಗರಗಳೂ ಸೇರಿದಂತೆ ಎಲ್ಲೆಡೆ, ಪಕ್ಷಿಗಳು ತಮ್ಮ ಸಮೂಹಗಾನದಲ್ಲಿ ಸಮಯ, ಆವಾಸಸ್ಠಾನ ಮತ್ತು ವಿಶಿಷ್ಟ ಸೂಚನೆ ನೀಡುವ ಸಲುವಾಗಿ ಕೂಗಿನ ಸಂಖ್ಯೆಯಲ್ಲಿ ಬದಲಾವಣೆ ತರುವ ವಿವಿಧ ತಂತ್ರಗಳನ್ನು ಬಳಸುತ್ತವೆ.

ಬೆಂಗಳೂರು

ಬಾವಲಿಗಳು ತಮ್ಮ ಪಾಡಿಗೆ ತಾವು ರಾತ್ರಿಯಲ್ಲಿ ಹಾರಾಡುವ ಸಸ್ತನಿಗಳು. ಇವು ಪ್ರಪಂಚದಾದ್ಯಂತ ಹರಡಿದ್ದು, ಇವುಗಳಲ್ಲಿ ಸುಮಾರು ೧೨೦೦ ಪ್ರಭೇದಗಳಿವೆ. ಈಗಿನ ಲಾಕ್ ಡೌನ್ ಗೆ ಕಾರಣವಾಗಿರುವ ಕೋವಿಡ್-೧೯ ಸಾಂಕ್ರಾಮಿಕವನ್ನು ಬಾವಲಿಗಳು ಹರಡುತ್ತಿವೆ ಎಂದು ಜನರು ತಿಳಿದಿದ್ದಾರೆ. ಇದಕ್ಕೆ ಪೂರಕವಾಗಿ, ಕೆಲವೇ ದಿನಗಳ ಹಿಂದೆ, ICMR (ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್)ನ  ಅಧ್ಯಯನವೊಂದು ದಕ್ಷಿಣ ಭಾರತದಲ್ಲಿ ಕಂಡುಬರುವ ಬಾವಲಿಗಳಲ್ಲಿ “ಬ್ಯಾಟ್-ಕೊರೊನ ವೈರಸ್” ಇದೆ ಎಂಬುದು ಬೆಳಕಿಗೆ ಬಂದಿದೆ. ಇದನ್ನೆಲ್ಲಾ ಓದಿದ ಜನ, ಭಯಭೀತರಾಗಿ ಕೆಲವೆಡೆ ಬಾವಲಿಗಳನ್ನು ಕೊಲ್ಲುವ ನಿರ್ಧಾರ ಮಾಡಿದ್ದಾರೆ. ಕೆಲವರಂತೂ ಮನೆ ಅಂಗಳದಲ್ಲಿರುವ ಸಪೋಟಾ, ಮಾವು ಹಾಗೂ ಬಾವಲಿಗಳು ಬರುವ ಇತರ ಗಿಡ-ಮರಗಳನ್ನು ಕಡಿಯುತ್ತಿದ್ದಾರೆ.

ಬೆಂಗಳೂರು

ವರ್ಚಸ್ವಿ ಪ್ರಾಣಿಗಳಲ್ಲಿ ಒಂದಾದ ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯನ್ನು ಪ್ರಪಂಚದಾದ್ಯಂತ ಪ್ರಾಣಿಸಂರಕ್ಷಣೆಯ ಮುಖವಾಗಿ ಬಳಸಲಾಗುತ್ತಿದೆ. 2019 ರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅಂತರ್ರಾಷ್ಟ್ರೀಯ ಹುಲಿ ದಿನವಾದ ಜುಲೈ 29 ರಂದು 2018 ರ ರಾಷ್ಟ್ರೀಯ ಹುಲಿ ಗಣತಿ (ಎನ್‌ಟಿಇ) ಸಮೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದರು. ಉದ್ದೇಶಿತ ಗಡುವಿಗೆ ನಾಲ್ಕು ವರ್ಷಗಳ ಮೊದಲೇ ಭಾರತವು ತನ್ನ ಹುಲಿ ಜನಸಂಖ್ಯೆಯನ್ನು ದ್ವಿಗುಣಗೊಳಿಸುವ ಗುರಿಯನ್ನು ಸಾಧಿಸಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು

2016 ರಲ್ಲಿ, ಒಂದು ದಿನ,  ಕ್ಷೇತ್ರ ಪರಿಸರ ವಿಜ್ಞಾನಿ ವಿಘ್ನೇಶ್ ಕಾಮತ್ ಅವರು ತಮಿಳುನಾಡಿನ ಕಾಲಕ್ಕಾಡ್ ಮುಂಡಂತುರೈ ಹುಲಿ ಅಭಯಾರಣ್ಯದಲ್ಲಿ  (ಕೆಎಂಟಿಆರ್) ಕಪ್ಪೆಗಳನ್ನು ಅಧ್ಯಯನ ಮಾಡುತ್ತಿದ್ದಾಗ, ಆಕಸ್ಮಿಕವಾಗಿ ಕಾಡಿನ ಮಧ್ಯೆ ನೀಲಗಿರಿ ಲಂಗೂರಿನ (ಬುಕ್ಕ/ಮುಸುವ/ಭಾರತದಲ್ಲಿ ಸಾಮಾನ್ಯವಾಗಿ ಕಂಡು ಬರುವ ಉದ್ದನೆಯ ಬಾಲಹೊಂದಿರುವ ಕರಿಮೂತಿಯ ಕಪಿ)  ಭಾಗಶಃ ತಿನ್ನಲಾಗಿದ್ದ ಶವವನ್ನು  ಗಮನಿಸಿದರು. ಕುತೂಹಲಕಾರಿಯಾದ ಅವರು, ಈ ಕಪಿಯನ್ನು ಯಾವ ಪ್ರಾಣಿ ಈ ರೀತಿ ಭಕ್ಷಿಸಿದೆ ಎಂದು ನೋಡಬಯಸಿದರು.

Subscribe to Ecology

Recent Stories

ಲೇಖಕರು
Research Matters
Lockeia gigantus trace fossils found from Fort Member. Credit: Authors

ಜೈ ನಾರಾಯಣ್ ವ್ಯಾಸ್ ವಿಶ್ವವಿದ್ಯಾಲಯದ ಸಂಶೋಧಕರು ಜೈಸಲ್ಮೇರ್ ನಗರದ ಬಳಿಯ ಜೈಸಲ್ಮೇರ್ ರಚನೆಯಲ್ಲಿ ಲಾಕಿಯಾ ಜೈಗ್ಯಾಂಟಸ್ ಪಳೆಯುಳಿಕೆಗಳನ್ನು ಕಂಡುಹಿಡಿದಿದ್ದಾರೆ. ಇದು ಭಾರತದಿಂದ ಇಂತಹ ಪಳೆಯುಳಿಕೆಗಳ ಮೊದಲ ದಾಖಲೆ ಮಾತ್ರವಲ್ಲ, ಇದುವರೆಗೆ ಪತ್ತೆಯಾದ ಅತಿದೊಡ್ಡ ಲಾಕಿಯಾ ಕುರುಹುಗಳು.

ಲೇಖಕರು
Research Matters
ಇಂಡೋ-ಬರ್ಮೀಸ್ ಪ್ಯಾಂಗೊಲಿನ್ (ಮನಿಸ್ ಇಂಡೋಬರ್ಮಾನಿಕಾ). ಕೃಪೆ: ವಾಂಗ್ಮೋ, ಎಲ್.ಕೆ., ಘೋಷ್, ಎ., ಡೋಲ್ಕರ್, ಎಸ್. ಮತ್ತು ಇತರರು.

ಕಳ್ಳತನದಿಂದ ಸಾಗಾಟವಾಗುತ್ತಿದ್ದ ಹಲವು ಪ್ರಾಣಿಗಳ ನಡುವೆ ಪ್ಯಾಂಗೋಲಿನ್ ನ ಹೊಸ ಪ್ರಭೇದವನ್ನು ಪತ್ತೆ ಮಾಡಲಾಗಿದೆ.

ಲೇಖಕರು
Research Matters
Lockeia gigantus trace fossils found from Fort Member. Credit: Authors

ಜೈ ನಾರಾಯಣ್ ವ್ಯಾಸ್ ವಿಶ್ವವಿದ್ಯಾಲಯದ ಸಂಶೋಧಕರು ಜೈಸಲ್ಮೇರ್ ನಗರದ ಬಳಿಯ ಜೈಸಲ್ಮೇರ್ ರಚನೆಯಲ್ಲಿ ಲಾಕಿಯಾ ಜೈಗ್ಯಾಂಟಸ್ ಪಳೆಯುಳಿಕೆಗಳನ್ನು ಕಂಡುಹಿಡಿದಿದ್ದಾರೆ. ಇದು ಭಾರತದಿಂದ ಇಂತಹ ಪಳೆಯುಳಿಕೆಗಳ ಮೊದಲ ದಾಖಲೆ ಮಾತ್ರವಲ್ಲ, ಇದುವರೆಗೆ ಪತ್ತೆಯಾದ ಅತಿದೊಡ್ಡ ಲಾಕಿಯಾ ಕುರುಹುಗಳು.

ಲೇಖಕರು
Research Matters
ಇಂಡೋ-ಬರ್ಮೀಸ್ ಪ್ಯಾಂಗೊಲಿನ್ (ಮನಿಸ್ ಇಂಡೋಬರ್ಮಾನಿಕಾ). ಕೃಪೆ: ವಾಂಗ್ಮೋ, ಎಲ್.ಕೆ., ಘೋಷ್, ಎ., ಡೋಲ್ಕರ್, ಎಸ್. ಮತ್ತು ಇತರರು.

ಕಳ್ಳತನದಿಂದ ಸಾಗಾಟವಾಗುತ್ತಿದ್ದ ಹಲವು ಪ್ರಾಣಿಗಳ ನಡುವೆ ಪ್ಯಾಂಗೋಲಿನ್ ನ ಹೊಸ ಪ್ರಭೇದವನ್ನು ಪತ್ತೆ ಮಾಡಲಾಗಿದೆ.

ಲೇಖಕರು
Research Matters
ಸ್ಪರ್ಶರಹಿತ ಬೆರಳಚ್ಚು ಸಂವೇದಕದ ಪ್ರಾತಿನಿಧಿಕ ಚಿತ್ರ

ಸಾಧಾರಣವಾಗಿ, ಫೋನ್ ಅನ್ನು ಅನ್ಲಾಕ್ ಮಾಡುವಾಗ ಅಥವಾ ಕಛೇರಿಯಲ್ಲಿ ಬಯೋಮೆಟ್ರಿಕ್ ಸ್ಕ್ಯಾನರುಗಳನ್ನು ಬಳಸುವಾಗ, ನಿಮ್ಮ ಬೆರಳನ್ನು ಸ್ಕ್ಯಾನರಿನ ಮೇಲ್ಮೈಗೆ ಒತ್ತ ಬೇಕಾಗುತ್ತದೆ. ಬೆರಳಚ್ಚುಗಳನ್ನು ಸೆರೆಹಿಡಿಯುವುದು ಹೀಗೆ. ಆದರೆ, ಹೊಸ ಸಂಶೋಧನೆಯೊಂದು ಈ ಪ್ರಕ್ರಿಯೆಯನ್ನು ಇನ್ನಷ್ಟು ಸ್ವಚ್ಛ, ಸುಲಭ ಮತ್ತು ಹೆಚ್ಚು ನಿಖರವಾಗಿಸುವ ವಿಧಾನವನ್ನು ರೂಪಿಸಿದೆ. ಸಾಧನವನ್ನು ಮುಟ್ಟದೆಯೇ ಬೆರಳಚ್ಚನ್ನು ಸಂಗ್ರಹಿಸುವ ಮಾರ್ಗವನ್ನು ಹುಡುಕಿದೆ.

ಲೇಖಕರು
Research Matters
ಮೈಕ್ರೋಸಾಫ್ಟ್ ಡಿಸೈನರ್ ನ ಇಮೇಜ್ ಕ್ರಿಯೇಟರ್ ಬಳಸಿ ಚಿತ್ರ ರಚಿಸಲಾಗಿದೆ

ಐಐಟಿ ಬಾಂಬೆಯ ಸಂಶೋಧಕರು ಶಾಕ್‌ವೇವ್-ಆಧಾರಿತ ಸೂಜಿ-ಮುಕ್ತ ಸಿರಿಂಜ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಮೂಲಕ ಸೂಜಿಗಳಿಲ್ಲದೆ ಔಷಧಿಗಳನ್ನು ಪೂರೈಸುವ ಮಾರ್ಗವನ್ನು ಕಂಡುಹಿಡಿದಿದ್ದಾರೆ.

ಲೇಖಕರು
Research Matters
ಅತ್ಯಂತ ಪ್ರಾಚೀನ ವಸ್ತುವಿನ ಅಧ್ಯಯನ

ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

ಲೇಖಕರು
Research Matters
ಕಾಂಕ್ರೀಟ್‌ ಪರೀಕ್ಷೆಗೆ ಪ್ರೋಬ್‌

ಕಾಂಕ್ರೀಟ್‌ನಲ್ಲಿ ಹುದುಗಿರುವ ರೆಬಾರ್‌ಗಳಲ್ಲಿನ ತುಕ್ಕು ಪ್ರಮಾಣವನ್ನು ಮಾಪಿಸಲು ವಿಜ್ಞಾನಿಗಳು ಒಂದು ಹೊಸ ತಪಾಸಕವನ್ನು ಅಭಿವೃದ್ಧಿಪಡಿಸಿದ್ದಾರೆ.

ಲೇಖಕರು
Research Matters
‘ದ್ವಿಪಾತ್ರ’ದಲ್ಲಿ ಮೈಕ್ರೋ ಆರ್‌ಎನ್‌ಎ

ವೈರಲ್ ಸೋಂಕುಗಳು ಮತ್ತು ಸ್ವಯಂ ನಿರೋಧಕ ಕಾಯಿಲೆಗಳಲ್ಲಿ ಮೈಕ್ರೋ ಆರ್‌ಎನ್‌ಎ ‘ದ್ವಿಪಾತ್ರ’ದಲ್ಲಿ ಕೆಲಸ ಮಾಡುತ್ತದೆ. 

ಲೇಖಕರು
Research Matters
ರೀಚಾರ್ಜ್ ಮಾಡಬಹುದಾದ ಬ್ಯಾಟರಿಗಳು

ಐಐಟಿ ಬಾಂಬೆ ಯ ಬ್ಯಾಟರಿ ಪ್ರೋಟೋಟೈಪಿಂಗ್ ಲ್ಯಾಬ್ ನ ಸಂಶೋಧಕರು ಇಂಧನ (ಶಕ್ತಿ) ಶೇಖರಣಾ ಸಾಧನವಾಗಿರುವ ರೀಚಾರ್ಜ್ ಮಾಡಬಹುದಾದ ಬ್ಯಾಟರಿಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ. 

Loading content ...
Loading content ...
Loading content ...
Loading content ...
Loading content ...