ಬೆಂಗಳೂರು

ಪಕ್ಷಿ ವೀಕ್ಷಣೆ, ಪಕ್ಷಿಗಳನ್ನು ಅವುಗಳ ನೈಸರ್ಗಿಕ ಪರಿಸರದಲ್ಲಿ ಗಮನಿಸುವ ಒಂದು ಕಲೆ. ಪಕ್ಷಿ ವೀಕ್ಷಣೆ, ಕೇವಲ ಪಕ್ಷಿಗಳನ್ನು ನೋಡುವುದಲ್ಲದೇ, ನಮ್ಮ ಆರಾಮ ವಲಯವನ್ನು ಮೀರಿ, ಅವುಗಳ ವೈವಿಧ್ಯಮಯ ಜಗತ್ತನ್ನು, ಅವುಗಳ  ವರ್ತನೆಯನ್ನು ತಾಳ್ಮೆಯಿಂದ ಗಮನಿಸುವುದು ಮತ್ತು ಕೆಲ ನಿಯಮಗಳನ್ನು ಪಾಲಿಸುವುದೂ ಒಳಗೊಂಡಿದೆ.  ಪಕ್ಷಿ ವೀಕ್ಷಣೆಯಲ್ಲಿ ವಯಸ್ಸು ಅಥವಾ ಅರ್ಹತೆಯ ನಿರ್ಬಂಧನೆಗಳಿಲ್ಲ ಹಾಗಾಗಿ ಎಲ್ಲರೂ ಆನಂದಿಸಬಹುದು. ಕೇವಲ ಅರಣ್ಯಗಳಲ್ಲದೇ, ನಮ್ಮ ಕಿಟಕಿಗಳೂ ಸಹ ಪಕ್ಷಿಗಳ ಜಗತ್ತಿನಲ್ಲಿ ಒಂದು ಇಣುಕು ನೋಟವನ್ನು ನೀಡಬಹುದು. ಸರಿಯಾದ ಮನಃಸ್ಥಿತಿಯೊಂದಿಗೆ ಕೆಲ ನಿಯಮಗಳನ್ನು ಪಾಲಿಸಿದಲ್ಲಿ ಪಕ್ಷಿ ವೀಕ್ಷಣೆ ದಿನನಿತ್ಯವೂ ಆಚರಿಸಬಲ್ಲಂತಹ ಒಂದು ಹಬ್ಬವಾಗಬಹುದು!

ಬೆಂಗಳೂರು

ಭೂಮಿಯ ಮೇಲೆ ಪರಮಾಣು ಶಸ್ತ್ರಾಸ್ತ್ರಗಳ ದುರ್ಬಳಕೆ ಅತ್ಯಂತ ವಿನಾಶಕಾರಿಯಾಗಿದ್ದು ಅವುಗಳು  ಸ್ಫೋಟಗೊಂಡ ಸ್ಥಳದ ಸುತ್ತಮುತ್ತ 3 ಕಿಲೊಮೀಟರ್ ವ್ಯಾಪ್ತಿಯೊಳಗಿರುವ ಎಲ್ಲವನ್ನೂ ಸುಟ್ಟು ಭಸ್ಮ ಮಾಡುವಂತ ಶಕ್ತಿಯನ್ನು ಹೊಂದಿವೆ. ಈ ಕ್ರಿಯೆಯಲ್ಲಿ ಬಿಡುಗಡೆಯಾಗುವ ಅಯಾನೀಕರಿಸುವ ವಿಕಿರಣಗಳು ನಿರ್ದಿಷ್ಟ  ಪ್ರದೇಶವನ್ನು ಹಾನಿಗೊಳಿಸುವ ಶಕ್ತಿಯನ್ನು ಹೊಂದಿದ್ದು, ದೀರ್ಘಾವಧಿಯಲ್ಲಿ ಆ ಪ್ರದೇಶವು ಬಾಧಿತಗೊಳ್ಳುವಂತೆ ಮಾಡುತ್ತವೆ ಅಲ್ಲದೇ ಆ ಇಡೀ ಪ್ರದೇಶವನ್ನು ವಾಸಕ್ಕೆ ಯೋಗ್ಯವಲ್ಲದಂತೆ ಮಾಡುತ್ತವೆ- ಎರಡನೇ ವಿಶ್ವ ಯುದ್ದದ ಸಂದರ್ಭದಲ್ಲಿ ಹಿರೋಶಿಮಾ ಮತ್ತು ನಾಗಸಾಕಿಯ ಮೇಲೆ ನಡೆದ ದುರಂತ ಬಾಂಬ್ ಸ್ಫೋಟಗಳ ರೀತಿಯಲ್ಲಿಯೇ- ಆದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಉಂಟಾಗುತ್ತದೆ.

ಬೆಂಗಳೂರು

2014ರಲ್ಲಿ, ಡಾ. ಸಾಹಿಲ್ ನಿಝಾವಾನ್ ನೇತೃತ್ವದ ಸ್ಥಳೀಯ ಇಡು-ಮಿಷ್ಮಿ ಜನಾಂಗದ ಒಂದು ಸಂಶೋಧನಾ ತಂಡ ಮಧ್ಯಮ ಹಾಗೂ ದೊಡ್ಡ ಗಾತ್ರದ ಸಸ್ತನಿಗಳ ಬಗ್ಗೆ ಅಧ್ಯಯನ ನಡೆಸುವ ಸಲುವಾಗಿ, ಈಶಾನ್ಯ ಭಾರತದ ಅರುಣಾಚಲ ಪ್ರದೇಶದ ದಿಬಾಂಗ್ ಕಣಿವೆಯ ಕಾಡುಗಳಲ್ಲಿ ಕ್ಯಾಮೆರಾಗಳನ್ನು ಇರಿಸಿದ್ದರು. ೨೦ ತಿಂಗಳುಗಳ ನಂತರ, ಕ್ಯಾಮೆರಾಗಳಲ್ಲಿ ಸೆರೆ ಹಿಡಿದಿದ್ದ ವಿಚಿತ್ರ ಹಾಗೂ ಅನಿರೀಕ್ಷಿತ ದೃಶ್ಯಗಳನ್ನು ಕಂಡು ನಿಬ್ಬೆರಗಾದರು. ಒಂದೇ ಪ್ರಭೇದದ ಆರು ಪ್ರತ್ಯೇಕ ಬಣ್ಣ ವಿಧಗಳ, ಮಧ್ಯಮ ಗಾತ್ರದ ಏಷ್ಯಾದ ಕಾಡು ಬೆಕ್ಕುಗಳು ಈ ಕಣಿವೆಯಲ್ಲಿ ಇರುವುದು ಈ ಕ್ಯಾಮೆರಾಗಳ ಮುಖೇನ ತಿಳಿದು ಬಂದಿದೆ.

ಬೆಂಗಳೂರು

 

ನೈಸರ್ಗಿಕ ವಿಕೋಪಗಳ ಪೈಕಿ ಭೂಕಂಪನವು ಅತಿ ವಿನಾಶಕಾರಿ ಮತ್ತು ಭಯ ಹುಟ್ಟಿಸುವಂತದ್ದು. ರಿಕ್ಟರ್ ಮಾಪಕದಲ್ಲಿ 5.0 ಅಥವಾ ಅದಕ್ಕಿಂತ ಹೆಚ್ಚಿನ ಪರಿಮಾಣದ ಸರಿಸುಮಾರು 5 ಭೂಕಂಪಗಳು ಪ್ರತಿದಿನ ಭೂಮಿಯ ಮೇಲೆ ಸಂಭವಿಸುತ್ತಲೇ ಇರುತ್ತವೆ. ಸ್ವತಃ ಭೂಕಂಪನಗಳೇ ವಿನಾಶಕಾರಿಯಾಗಿದ್ದು, ಇದರಿಂದ ಉಂಟಾಗಬಹುದಾದ ಸುನಾಮಿ ಅಲೆಗಳಿಂದಲೂ ತಮ್ಮ ಪ್ರಭಾವವನ್ನು ಬೀರಬಲ್ಲವಾಗಿವೆ. ಸಹಜವಾಗಿ  ಭೂಕಂಪನದ ತೀವ್ರತೆ, ಅಧಿಕೇಂದ್ರದಿಂದ ಇರುವ ದೂರ ಮತ್ತು ಆ ಪ್ರದೇಶದ ನೆಲದ ಸ್ವರೂಪ, ಹೀಗೆ ಕೆಲವು ಅಂಶಗಳು ಸಾಮಾನ್ಯವಾಗಿ ಭೂಕಂಪನದಿಂದ ಉಂಟಾಗುವ ಹಾನಿಯನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ.

ಬೆಂಗಳೂರು

ನಾವೆಲ್ಲರೂ ಓದುವುದನ್ನು ಹೇಗೆ ಕಲಿತೆವು ಎಂದು ನೆನಪಿಸಿಕೊಂಡರೆ- ಮೊದಲಿಗೆ ನಾವು ಪ್ರತಿಯೊಂದು ಅಕ್ಷರ ಹೇಗೆ ಉಚ್ಚರಿಸುವುದು ಎಂದು ಕಲಿಯುತ್ತೇವೆ. ನಂತರ ಪೂರ್ತಿ ಪದ(ಗಳು)  ಮತ್ತು  ವಾಕ್ಯಗಳನ್ನು ಸುಲಭವಾಗಿ ಹೇಳಲು ಕಲಿಯುತ್ತೇವೆ. ಆದರೆ, ನಾವು ಓದಲು ಕಲಿಯುವಾಗ, ನಮ್ಮ ಮೆದುಳಿನಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತವೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

Bengaluru

1960ರಿಂದ, ಜಗತ್ತು ತನ್ನ ಉಷ್ಣವಲಯದ ಸುಮಾರು ಅರ್ಧದಷ್ಟು ಕಾಡುಗಳನ್ನು  ತೋಟಗಾರಿಕೆ, ಮರಕಡಿತ, ಕಾಡಿನ ಬೆಂಕಿ ಮತ್ತು ರೋಗಗಳಿಗೆ ಕಳೆದುಕೊಂಡಿದೆ ಎಂದು ನಿಮಗೆ ತಿಳಿದಿದೆಯೇ? ಪ್ರಸ್ತುತ, ವರ್ಷಕ್ಕೆ ಸುಮಾರು 8 ದಶಲಕ್ಷ ಹೆಕ್ಟೇರ್ ಉಷ್ಣವಲಯದ ಕಾಡುಗಳು ಕಳೆದುಹೋಗಿವೆ. ಉಷ್ಣವಲಯದ ಕಾಡುಗಳು ಜಾಗತಿಕ ಜೀವವೈವಿಧ್ಯತೆಯ ನೆಲೆಯಾಗಿರುವುದರಿಂದ,  ಇದು ಕೇವಲ ಜೀವವೈವಿಧ್ಯತೆಯ ಮೇಲೆ  ಪರಿಣಾಮ ಬೀರುವುದಲ್ಲದೇ, ೧.೬ ಶತಕೋಟಿ ಜನರ ಜೀವನದ ಮೇಲೆಯೂ ಪರಿಣಾಮ ಬೀರುತ್ತದೆ. ಆದರೂ, ಮಾನವ ಪ್ರಾಬಲ್ಯದ ಭೂದೃಶ್ಯಗಳಲ್ಲಿ, ಅವನತಿಗೀಡಾದ  ಕಾಡುಗಳ ಪುನಶ್ಚೇತನ, ಇದುವರೆಗೆ ಸಂಭವಿಸಿರುವ ನಷ್ಟಗಳನ್ನು ಹಿಮ್ಮೆಟ್ಟಿಸಲು ಮತ್ತು ಈ ಕಾಡುಗಳ ಚೇತರಿಕೆಗೆ ಸಹಾಯ ಮಾಡುತ್ತದೆ.

ಬೆಂಗಳೂರು

ಅಧಿಕ ರಕ್ತದೊತ್ತಡವು ಭಾರತದಲ್ಲಿ ಸಾಮಾನ್ಯವಾಗಿ ಕಾಣುವ ದೀರ್ಘಕಾಲದ ಕಾಯಿಲೆಗಳಲಿೢ ಒಂದು. ರಾಷ್ಟ್ರೀಯ ಆರೋಗ್ಯ ವಿವರ (ನ್ಯಾಷನಲ್ ಹೆಲ್ತ್ ಪೋರ್ಟಲ್ - ಎನ್‌.ಎಚ್‌.ಪಿ) ೨೦೧೯ ರ ಪ್ರಕಾರ, ೨೦೧೮ ರಲ್ಲಿ ಸರ್ಕಾರಿ ಚಿಕಿತ್ಸಾಲಯಗಳಿಗೆ ಭೇಟಿನೀಡಿದ ಎಲ್ಲ ರೋಗಿಗಳಲ್ಲಿ ೬.೧೯% ಜನರು ಅಧಿಕರಕ್ತದೊತ್ತಡಕ್ಕೆ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಸಂಖ್ಯೆ ಮಧುಮೇಹದಿಂದ ಬಳಲುತ್ತಿರುವ ಜನರಿಗಿಂತ ಹೆಚ್ಚಾಗಿದೆ (ಸುಮಾರು ೪.೭೫% ರಷ್ಟು). ಆದರೆ ಎನ್‌.ಎಚ್‌.ಪಿಯಲ್ಲಿ ಖಾಸಗಿ ಚಿಕಿತ್ಸಾಲಯಗಳಿಗೆ ಭೇಟಿ ನೀಡುವ ಜನರನ್ನು ಪರಿಗಣಿಸುವುದಿಲ್ಲ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್  ಪ್ರಕಾರ, ನಮ್ಮ ದೇಶದಲ್ಲಿ ೧೦.೧೮ %ರಷ್ಟು ಮರಣಗಳಿಗೆ ಅಧಿಕ ರಕ್ತದೊತ್ತಡ ಮುಖ್ಯ ಕಾರಣವಾಗಿದೆ.

ಬೆಂಗಳೂರು

‘ಸಗಣಿ’ ಜೀರುಂಡೆಗಳು ಆಕರ್ಷಕ ಜೀವಿಗಳು. ಇವು ಪ್ರಾಣಿಗಳ ಸಗಣಿಗಳನ್ನು ಆಹಾರವಾಗಿ ಸೇವಿಸುತ್ತವೆ ಮತ್ತು ಅದರಿಂದ ಅವುಗಳ ಎಲ್ಲಾ ಪೋಷಕಾಂಶಗಳನ್ನು ಪಡೆಯುತ್ತವೆ. ಈ ಸಣ್ಣ ಜೀರುಂಡೆಗಳು, ಸಗಣಿಯನ್ನು  ತಿನ್ನುವ ಮೂಲಕ ಮಣ್ಣಿನ ರಚನೆ ಮತ್ತು ಮಣ್ಣಿನ ಫಲವತ್ತತೆಯನ್ನು ಸುಧಾರಿಸುತ್ತವೆ. ಹಾಗಾಗಿ, ಇವು ಕೃಷಿಯಲ್ಲಿ ಅತ್ಯಗತ್ಯ ಪಾತ್ರವನ್ನು ವಹಿಸುತ್ತವೆ.   ಪ್ರಾಣಿಗಳ ಸಗಣಿಯಲ್ಲಿ ಇರುವ ಬೀಜಗಳನ್ನು ಹರಡಲು, ಬೀಜಗಳನ್ನು ಮಣ್ಣಲ್ಲಿ ಸೇರಿಸುವ ಮೂಲಕ, ಉಷ್ಣವಲಯಪ್ರದೇಶಗಳಲ್ಲಿ ಗಿಡಮರಗಳು ಬೆಳೆಯಲು ಸಹಾಯ ಮಾಡುತ್ತವೆ. ಇವು ಸರ್ವಭಕ್ಷಕಗಳಿಗಿಂತ ಸಸ್ಯಹಾರಿಗಳ ಸಗಣಿಗಳಿಗೆ ಆದ್ಯತೆ ನೀಡುತ್ತವೆ.

ಬೆಂಗಳೂರು

ಗೆದ್ದಲುಗಳು ತಮ್ಮ ಸಾಮಾಜಿಕ ಸಂಘಟನೆ, ವಾಸ್ತುಶಿಲ್ಪ ವಿನ್ಯಾಸ ಸಾಮರ್ಥ್ಯಗಳಿಗೆ ಮತ್ತು ಕುಖ್ಯಾತವಾಗಿ ಕೀಟಗಳಾಗಿ ಹೆಸರುವಾಸಿ. ಆದಾಗ್ಯೂ, ಈ ವರೆಗೆ ವರ್ಣಿಸಲಾದ ಎಲ್ಲ ಪ್ರಭೇದಗಳು ಹಾನಿ ಉಂಟು ಮಾಡುವ ವರ್ಗಕ್ಕೆ ಸೇರುವುದಿಲ್ಲ. ಒಂದು ಕಡೆ ವಿಶ್ವದ ಗೆದ್ದಲು ಪ್ರಭೇದಗಳಲ್ಲಿ ಕೇವಲ 12.5% ​​ರಷ್ಟು ಮಾತ್ರ ಅಪಾರ ಆರ್ಥಿಕ ಹಾನಿಯನ್ನುಂಟುಮಾಡುವ ಕೀಟಗಳಾದರೆ, ಮತ್ತೊಂದೆಡೆ ಇವುಗಳ ಮಣ್ಣಿನಲ್ಲಿ ವಾಸಿಸುವ ಪ್ರತಿರೂಪಗಳು, ನೈಸರ್ಗಿಕ ಜಗತ್ತಿನಲ್ಲಿ ಅತ್ಯಗತ್ಯ ಪಾತ್ರವನ್ನು ವಹಿಸುತ್ತವೆ. ಇವು ಕಠಿಣ ಸಸ್ಯನಾರುಗಳನ್ನು ಕೊಳೆಸಲು ಅಥವಾ ಭಾಗಗಳಾಗಿ ವಿಭಜಿಸಲು ಸಹಾಯ ಮಾಡುತ್ತವೆ ಮತ್ತು ಪೋಷಕಾಂಶಗಳನ್ನು ಮಣ್ಣಿನಲ್ಲಿ ಮರುಬಳಕೆ ಮಾಡುತ್ತವೆ.

Subscribe to Science

Recent Stories

ಲೇಖಕರು
Research Matters
Lockeia gigantus trace fossils found from Fort Member. Credit: Authors

ಜೈ ನಾರಾಯಣ್ ವ್ಯಾಸ್ ವಿಶ್ವವಿದ್ಯಾಲಯದ ಸಂಶೋಧಕರು ಜೈಸಲ್ಮೇರ್ ನಗರದ ಬಳಿಯ ಜೈಸಲ್ಮೇರ್ ರಚನೆಯಲ್ಲಿ ಲಾಕಿಯಾ ಜೈಗ್ಯಾಂಟಸ್ ಪಳೆಯುಳಿಕೆಗಳನ್ನು ಕಂಡುಹಿಡಿದಿದ್ದಾರೆ. ಇದು ಭಾರತದಿಂದ ಇಂತಹ ಪಳೆಯುಳಿಕೆಗಳ ಮೊದಲ ದಾಖಲೆ ಮಾತ್ರವಲ್ಲ, ಇದುವರೆಗೆ ಪತ್ತೆಯಾದ ಅತಿದೊಡ್ಡ ಲಾಕಿಯಾ ಕುರುಹುಗಳು.

ಲೇಖಕರು
Research Matters
ಇಂಡೋ-ಬರ್ಮೀಸ್ ಪ್ಯಾಂಗೊಲಿನ್ (ಮನಿಸ್ ಇಂಡೋಬರ್ಮಾನಿಕಾ). ಕೃಪೆ: ವಾಂಗ್ಮೋ, ಎಲ್.ಕೆ., ಘೋಷ್, ಎ., ಡೋಲ್ಕರ್, ಎಸ್. ಮತ್ತು ಇತರರು.

ಕಳ್ಳತನದಿಂದ ಸಾಗಾಟವಾಗುತ್ತಿದ್ದ ಹಲವು ಪ್ರಾಣಿಗಳ ನಡುವೆ ಪ್ಯಾಂಗೋಲಿನ್ ನ ಹೊಸ ಪ್ರಭೇದವನ್ನು ಪತ್ತೆ ಮಾಡಲಾಗಿದೆ.

ಲೇಖಕರು
Research Matters
Lockeia gigantus trace fossils found from Fort Member. Credit: Authors

ಜೈ ನಾರಾಯಣ್ ವ್ಯಾಸ್ ವಿಶ್ವವಿದ್ಯಾಲಯದ ಸಂಶೋಧಕರು ಜೈಸಲ್ಮೇರ್ ನಗರದ ಬಳಿಯ ಜೈಸಲ್ಮೇರ್ ರಚನೆಯಲ್ಲಿ ಲಾಕಿಯಾ ಜೈಗ್ಯಾಂಟಸ್ ಪಳೆಯುಳಿಕೆಗಳನ್ನು ಕಂಡುಹಿಡಿದಿದ್ದಾರೆ. ಇದು ಭಾರತದಿಂದ ಇಂತಹ ಪಳೆಯುಳಿಕೆಗಳ ಮೊದಲ ದಾಖಲೆ ಮಾತ್ರವಲ್ಲ, ಇದುವರೆಗೆ ಪತ್ತೆಯಾದ ಅತಿದೊಡ್ಡ ಲಾಕಿಯಾ ಕುರುಹುಗಳು.

ಲೇಖಕರು
Research Matters
ಇಂಡೋ-ಬರ್ಮೀಸ್ ಪ್ಯಾಂಗೊಲಿನ್ (ಮನಿಸ್ ಇಂಡೋಬರ್ಮಾನಿಕಾ). ಕೃಪೆ: ವಾಂಗ್ಮೋ, ಎಲ್.ಕೆ., ಘೋಷ್, ಎ., ಡೋಲ್ಕರ್, ಎಸ್. ಮತ್ತು ಇತರರು.

ಕಳ್ಳತನದಿಂದ ಸಾಗಾಟವಾಗುತ್ತಿದ್ದ ಹಲವು ಪ್ರಾಣಿಗಳ ನಡುವೆ ಪ್ಯಾಂಗೋಲಿನ್ ನ ಹೊಸ ಪ್ರಭೇದವನ್ನು ಪತ್ತೆ ಮಾಡಲಾಗಿದೆ.

ಲೇಖಕರು
Research Matters
ಸ್ಪರ್ಶರಹಿತ ಬೆರಳಚ್ಚು ಸಂವೇದಕದ ಪ್ರಾತಿನಿಧಿಕ ಚಿತ್ರ

ಸಾಧಾರಣವಾಗಿ, ಫೋನ್ ಅನ್ನು ಅನ್ಲಾಕ್ ಮಾಡುವಾಗ ಅಥವಾ ಕಛೇರಿಯಲ್ಲಿ ಬಯೋಮೆಟ್ರಿಕ್ ಸ್ಕ್ಯಾನರುಗಳನ್ನು ಬಳಸುವಾಗ, ನಿಮ್ಮ ಬೆರಳನ್ನು ಸ್ಕ್ಯಾನರಿನ ಮೇಲ್ಮೈಗೆ ಒತ್ತ ಬೇಕಾಗುತ್ತದೆ. ಬೆರಳಚ್ಚುಗಳನ್ನು ಸೆರೆಹಿಡಿಯುವುದು ಹೀಗೆ. ಆದರೆ, ಹೊಸ ಸಂಶೋಧನೆಯೊಂದು ಈ ಪ್ರಕ್ರಿಯೆಯನ್ನು ಇನ್ನಷ್ಟು ಸ್ವಚ್ಛ, ಸುಲಭ ಮತ್ತು ಹೆಚ್ಚು ನಿಖರವಾಗಿಸುವ ವಿಧಾನವನ್ನು ರೂಪಿಸಿದೆ. ಸಾಧನವನ್ನು ಮುಟ್ಟದೆಯೇ ಬೆರಳಚ್ಚನ್ನು ಸಂಗ್ರಹಿಸುವ ಮಾರ್ಗವನ್ನು ಹುಡುಕಿದೆ.

ಲೇಖಕರು
Research Matters
ಮೈಕ್ರೋಸಾಫ್ಟ್ ಡಿಸೈನರ್ ನ ಇಮೇಜ್ ಕ್ರಿಯೇಟರ್ ಬಳಸಿ ಚಿತ್ರ ರಚಿಸಲಾಗಿದೆ

ಐಐಟಿ ಬಾಂಬೆಯ ಸಂಶೋಧಕರು ಶಾಕ್‌ವೇವ್-ಆಧಾರಿತ ಸೂಜಿ-ಮುಕ್ತ ಸಿರಿಂಜ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಮೂಲಕ ಸೂಜಿಗಳಿಲ್ಲದೆ ಔಷಧಿಗಳನ್ನು ಪೂರೈಸುವ ಮಾರ್ಗವನ್ನು ಕಂಡುಹಿಡಿದಿದ್ದಾರೆ.

ಲೇಖಕರು
Research Matters
ಅತ್ಯಂತ ಪ್ರಾಚೀನ ವಸ್ತುವಿನ ಅಧ್ಯಯನ

ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

ಲೇಖಕರು
Research Matters
ಕಾಂಕ್ರೀಟ್‌ ಪರೀಕ್ಷೆಗೆ ಪ್ರೋಬ್‌

ಕಾಂಕ್ರೀಟ್‌ನಲ್ಲಿ ಹುದುಗಿರುವ ರೆಬಾರ್‌ಗಳಲ್ಲಿನ ತುಕ್ಕು ಪ್ರಮಾಣವನ್ನು ಮಾಪಿಸಲು ವಿಜ್ಞಾನಿಗಳು ಒಂದು ಹೊಸ ತಪಾಸಕವನ್ನು ಅಭಿವೃದ್ಧಿಪಡಿಸಿದ್ದಾರೆ.

ಲೇಖಕರು
Research Matters
‘ದ್ವಿಪಾತ್ರ’ದಲ್ಲಿ ಮೈಕ್ರೋ ಆರ್‌ಎನ್‌ಎ

ವೈರಲ್ ಸೋಂಕುಗಳು ಮತ್ತು ಸ್ವಯಂ ನಿರೋಧಕ ಕಾಯಿಲೆಗಳಲ್ಲಿ ಮೈಕ್ರೋ ಆರ್‌ಎನ್‌ಎ ‘ದ್ವಿಪಾತ್ರ’ದಲ್ಲಿ ಕೆಲಸ ಮಾಡುತ್ತದೆ. 

ಲೇಖಕರು
Research Matters
ರೀಚಾರ್ಜ್ ಮಾಡಬಹುದಾದ ಬ್ಯಾಟರಿಗಳು

ಐಐಟಿ ಬಾಂಬೆ ಯ ಬ್ಯಾಟರಿ ಪ್ರೋಟೋಟೈಪಿಂಗ್ ಲ್ಯಾಬ್ ನ ಸಂಶೋಧಕರು ಇಂಧನ (ಶಕ್ತಿ) ಶೇಖರಣಾ ಸಾಧನವಾಗಿರುವ ರೀಚಾರ್ಜ್ ಮಾಡಬಹುದಾದ ಬ್ಯಾಟರಿಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ. 

Loading content ...
Loading content ...
Loading content ...
Loading content ...
Loading content ...