ಬೆಂಗಳೂರು

ಮಧುಮೇಹ, ಅಧಿಕ ರಕ್ತದೊತ್ತಡ, ಪಾರ್ಕಿನ್ಸನ್ ಮುಂತಾದ ಸಾಂಕ್ರಾಮಿಕವಲ್ಲದ ರೋಗಗಳು, ಅಂದರೆ, ಒಬ್ಬ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡದ ರೋಗಗಳು, ಇಂದು ಸಾರ್ವಜನಿಕ ಆರೋಗ್ಯ ಕ್ಷೇತ್ರದ ಪ್ರಮುಖ ಸವಾಲುಗಳಾಗಿವೆ. ಭಾರತದಲ್ಲಿ, ಸುಮಾರು ಮೂವರಲ್ಲಿ ಒಬ್ಬರಿಗೆ ಅಧಿಕ ರಕ್ತದೊತ್ತಡವಿರುತ್ತದೆ ಮತ್ತು ೮% ರಷ್ಟು ಜನರಿಗೆ ಮಧುಮೇಹ ಇರುತ್ತದೆ ಎಂದು ತಿಳಿದುಬಂದಿದೆ. ದಿನೇದಿನೇ ಹೆಚ್ಚುತ್ತಿರುವ ಈ ಸಮಸ್ಯೆಯನ್ನು ಬಗೆಹರಿಸುವ ಮಾರ್ಗವೆಂದರೆ, ಸರ್ಕಾರದ ಬೆಂಬಲದೊಂದಿಗೆ ಬಲವಾದ ಆರೋಗ್ಯ ಸೇವೆ ವ್ಯವಸ್ಥೆಯನ್ನು ನಿರ್ಮಿಸುವುದು ಮತ್ತು ಅದರ ಮುಖಾಂತರ, ಇಂತಹ ಖಾಯಿಲೆಗಳಿಗೆ ಔಷಧಿಗಳನ್ನು ಎಲ್ಲರಿಗೂ ಸುಲಭವಾಗಿ, ಕಡಿಮೆ ದರದಲ್ಲಿ ಲಭ್ಯವಿರುವಂತೆ ಮಾಡುವುದು. ಇದೇ ಕಾರಣಕ್ಕಾಗಿಯೇ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಎಲ್ಲೆಲ್ಲೂ ಸ್ಥಾಪಿತವಾಗಿವೆ; ಆದರೆ ಅವು ಎಷ್ಟು ಪರಿಣಾಮಕಾರಿ? ವಿಶ್ವ ಆರೋಗ್ಯ ಸಂಸ್ಥೆಯಿಂದ ಪ್ರಾಯೋಜಿತ ಹೊಸ ಅಧ್ಯಯನವೊಂದು ಇದರ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದೆ.

"ಭಾರತವು ೨೦೧೦ರಲ್ಲಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಸೇರಿದಂತೆ ಹಲವಾರು ಸಾಂಕ್ರಾಮಿಕವಲ್ಲದ ರೋಗಗಳನ್ನು ಪರಿಹರಿಸಲು ರಾಷ್ಟ್ರೀಯ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು, ಇಂತಹ ಖಾಯಿಲೆಗಳ ನಿರ್ವಹಣಾ ಕಾರ್ಯತಂತ್ರದ ಸಮಗ್ರತೆಯ ಅಗತ್ಯವನ್ನು ಒತ್ತಿಹೇಳುತ್ತದೆ. ಇದು ಈ ರೋಗಗಳ ತಡೆಗಟ್ಟುವಿಕೆ, ಆರಂಭಿಕ ರೋಗನಿರ್ಣಯ, ಸೂಕ್ತ ನಿರ್ವಹಣೆ ಮತ್ತು ವಿವಿಧ ಹಂತಗಳಲ್ಲಿ ಬಳಸಬೇಕಾಗುವ ನಿರ್ದಿಷ್ಟ ಆರೋಗ್ಯ ತಂತ್ರಗಳ ಸೇವೆಯನ್ನು ಒಳಗೊಂಡಿರುತ್ತದೆ." ಎನ್ನುತ್ತಾರೆ ಬೆಂಗಳೂರಿನ ಸಾರ್ವಜನಿಕ ಆರೋಗ್ಯ ಕೇಂದ್ರದ 'ಆರೋಗ್ಯನೀತಿ ಮತ್ತು ಮೌಲ್ಯಮಾಪನ ತಂಡ'ದ ಮುಖ್ಯಸ್ಥ ಮತ್ತು ಈ ಸಂಶೋಧನೆಯ ಪ್ರಮುಖ ಸಂಶೋಧಕರಾದ  ಡಾ. ಎನ್. ಎಸ್. ಪ್ರಶಾಂತ್.

'ಬಿ.ಎಂ.ಜೆ. ಗ್ಲೋಬಲ್ ಹೆಲ್ತ್' ಪತ್ರಿಕೆಯಲ್ಲಿ ಪ್ರಕಟವಾದ ಈ ಅಧ್ಯಯನವು, ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡವನ್ನು ಎದುರಿಸಲು ಆರೋಗ್ಯ ಸೇವೆಯ ವಿತರಣಾ ವ್ಯವಸ್ಥೆಯಲ್ಲಿನ ಅನೇಕ ಲೋಪದೋಷಗಳನ್ನು ಅಧ್ಯಯನ ಮಾಡಿದೆ. "ನಾವು ಮಧುಮೇಹ ಮತ್ತು ಅಧಿಕ ರಕ್ತದೊತ್ತಡವನ್ನೇ ಆಯ್ಕೆ ಮಾಡಲು ಕಾರಣ, ಸಾಂಕ್ರಾಮಿಕವಲ್ಲದ ರೋಗಗಳಲ್ಲಿ ಇವು ಸುಲಭವಾಗಿ ಅರ್ಥೈಸಿಕೊಳ್ಳಬಹುದಾದದ್ದು ಎಂದು ಪರಿಗಣಿಸಲಾಗಿದೆ ಮತ್ತು ಇವೆರಡೂ ರೋಗಗಳ ನಿವಾರಣೆಗೆ ಜಾಗತಿಕವಾಗಿ, ಪ್ರಾಥಮಿಕ ಆರೈಕೆಯ ಮಟ್ಟದಲ್ಲೇ ಉತ್ತರ ಲಭ್ಯವಿದೆ ಎಂದು ನಿರೀಕ್ಷಿಸಲಾಗಿದೆ" ಎನ್ನುತ್ತಾರೆ ಡಾ. ಪ್ರಶಾಂತ್.

ಸಂಶೋಧಕರು ಈ ಅಧ್ಯಯನಕ್ಕಾಗಿ ೧೧೫೭ ಮಧುಮೇಹ / ಅಧಿಕ ರಕ್ತದೊತ್ತಡದ ರೋಗಿಗಳ ಯಾದೃಚ್ಛಿಕ ಮಾದರಿಯನ್ನು ಆಯ್ಕೆ ಮಾಡಿದರು; ಜೊತೆಗೇ ಅವರ ದಿನನಿತ್ಯದ ಜೀವನದ ಬಗ್ಗೆ ಸಮೀಕ್ಷೆಯನ್ನು ನಡೆಸಿ, ರೋಗಿಗಳನ್ನು ಸಂದರ್ಶಿಸಿದರು. ಅಷ್ಟೇ ಅಲ್ಲದೇ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡವನ್ನು ಪರಿಹರಿಸಲು ಬೇಕಾದ  ಸ್ಥಳೀಯ ಆರೋಗ್ಯ ವ್ಯವಸ್ಥೆಯ ಸನ್ನದ್ಧತೆಯನ್ನು ಅರ್ಥಮಾಡಿಕೊಳ್ಳುವ ಮತ್ತು ಮೌಲ್ಯಮಾಪನ ಮಾಡುವ ಸಲುವಾಗಿ ರೋಗಿಗಳು, ಆರೋಗ್ಯ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಅಧಿಕಾರಿಗಳು ಮತ್ತು ಔಷಧಕಾರರೊಂದಿಗೆ ಚರ್ಚೆ ನಡೆಸಿದರು.

ಸಮೀಕ್ಷೆಯಿಂದ ತಿಳಿದುಬಂದ ಅಂಶವೇನೆಂದರೆ, ೧೦%ಕ್ಕಿಂತಲೂ ಕಡಿಮೆ ಜನರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ  ತಮ್ಮ ಔಷಧಿಗಳನ್ನು ಪಡೆಯುತ್ತಿದರು ಮತ್ತು ೭೬%ರಷ್ಟು ಜನ ತಮ್ಮ ಔಷಧಿಗಳನ್ನು ಖಾಸಗಿ ಔಷಧಾಲಯದಿಂದ ಕೊಳ್ಳುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಯು ದುಬಾರಿಯಾಗಿದ್ದರೂ, ಅದು ಉತ್ತಮ ಗುಣಮಟ್ಟದ್ದು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರೈಕೆಯು ಅಸಮಂಜಸವಾಗಿದೆ ಎಂದು ಸಂದರ್ಶಿತ ವ್ಯಕ್ತಿಗಳು ಭಾವಿಸಿದ್ದರು. ಅಷ್ಟೇ ಅಲ್ಲದೆ, ಅವರ ಪ್ರಕಾರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಔಷಧಿಗಳು ಲಭ್ಯವಿರಲಿಲ್ಲ ಅಥವಾ ಲಭ್ಯವಿದ್ದರೂ ಕಳಪೆ ಗುಣಮಟ್ಟದ್ದಾಗಿದ್ದವು. ತನಿಖೆ ನಡೆಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ಮೂರನೇ ಒಂದು ಭಾಗದಷ್ಟು ಕೇಂದ್ರಗಳು ವೈದ್ಯರು, ಔಷಧಿಕಾರರು ಅಥವಾ ಸೂಕ್ತ ಪ್ರಯೋಗಾಲಯವನ್ನು ಹೊಂದಿರಲಿಲ್ಲ. ಇದು ಖಾಸಗಿ ಆರೋಗ್ಯ ಸೇವೆಯ ಮೇಲಿನ ಅವಲಂಬನೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಆಡಳಿತ ಮಟ್ಟದಲ್ಲಿ ವೈದ್ಯಕೀಯ ಅಧಿಕಾರಿಗಳು ಅಥವಾ ಆರೋಗ್ಯ ನಿರ್ವಾಹಕರ ಪ್ರಮುಖ ಆದ್ಯತೆಗಳಲ್ಲಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ರೋಗಗಳು ಕಂಡುಬರುವುದಿಲ್ಲ ಎಂಬುದು ಈ ಅಧ್ಯಯನದಿಂದ ತಿಳಿದುಬಂದಿದೆ. ಅವರ ಗಮನ ಸಾಮಾನ್ಯವಾಗಿ ತಾಯಿ-ಮಗುವಿನ ಆರೈಕೆ ಮತ್ತು ಸಾಂಕ್ರಾಮಿಕ ರೋಗಗಳ ಕಡೆಗೆ ಇರುತ್ತದೆ; ಜೊತೆಗೇ, ಸಾಮಾನ್ಯವಾಗಿ ಸಾಂಕ್ರಾಮಿಕ ರೋಗಗಳಿಗೆ ಆರ್ಥಿಕ ಮತ್ತು ವ್ಯವಸ್ಥಾಪನ ಸಂಪನ್ಮೂಲಗಳ ಹಂಚಿಕೆ ಹೆಚ್ಚಿಗೆ ಇದ್ದು, ನಿರ್ದಿಷ್ಟವಾಗಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಕಡೆಗೆ ಕಡಿಮೆಯಿದೆ.

ಡಾ. ಪ್ರಶಾಂತ್ ಅವರ ಪ್ರಕಾರ ಗ್ರಾಮಗಳಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ಸಾಂಕ್ರಾಮಿಕವಲ್ಲದ ರೋಗಗಳನ್ನು ಪರಿಹರಿಸಲು ಸಂಪನ್ಮೂಲಗಳು ಅಥವಾ ಚಟುವಟಿಕೆಗಳ ಹಂಚಿಕೆ ಕಡಿಮೆಯಿದ್ದು, ತೌಲನಿಕವಾಗಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಇಂತಹ ಖಾಯಿಲೆಗಳ ಬಗ್ಗೆ, ಇವುಗಳನ್ನು ತಡೆಗಟ್ಟುವ ಬಗ್ಗೆ ಹೆಚ್ಚು ಕಾಳಜಿ ಕಂಡುಬಂದಿದೆ. ಇಷ್ಟೇ ಅಲ್ಲದೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯರು ಕೆಲವು ರೋಗಿಗಳಿಗೆ ಖಾಸಗಿ ವೈದ್ಯಕೀಯ ಸೇವೆಯನ್ನುಪಡೆಯುವ ಸಲಹೆಯನ್ನು ನೀಡುವುದು ಕಂಡುಬಂದಿದೆ. ಅತಿರೇಕದ ಭ್ರಷ್ಟಾಚಾರವೂ ಕಂಡುಬಂದಿದ್ದು, ಇದು ಕೂಡ ಜನರನ್ನು ಖಾಸಗಿ ವೈದ್ಯಕೀಯ ಸೇವೆ ಪಡೆಯುವ ಕಡೆಗೆ ಮುಖ ಮಾಡುವಂತೆ ಮಾಡುತ್ತಿದೆ.

ಕಡಿಮೆ ಮತ್ತು ಮಧ್ಯಮ-ಆದಾಯದ ರಾಷ್ಟ್ರಗಳಲ್ಲಿರುವ ಆರೋಗ್ಯ ವ್ಯವಸ್ಥೆಗಳು ತಮ್ಮ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಮಧುಮೇಹ / ಅಧಿಕ ರಕ್ತದೊತ್ತಡದ ಬಗ್ಗೆ ಕಾಳಜಿಯನ್ನು ಹುಟ್ಟಿಸಲು ಮತ್ತು ನಿರ್ವಹಿಸಲು ಹೆಣಗಾಡುತ್ತಿವೆ. ಅಧ್ಯಯನವು ಕಂಡುಕೊಂಡಂತೆ ಮೂಲಸೌಕರ್ಯದ ಕೊರತೆ, ಮಾನವ ಸಂಪನ್ಮೂಲದ ಅಲಭ್ಯತೆ, ಸ್ಥಳೀಯ ಆರೋಗ್ಯ ವ್ಯವಸ್ಥೆಗಳ ಕಾರ್ಯಕ್ಷಮತೆಯ ಕೊರತೆಯು ಉತ್ತಮ ಗುಣಮಟ್ಟದ ಆರೋಗ್ಯಸೇವೆಯನ್ನು ನೀಡುವುದಕ್ಕೆ ಅಡ್ಡಗಾಲಾಗಿದೆ.

ಮೂಲಭೂತ ಸೌಕರ್ಯದಲ್ಲಿ ಹೂಡಿಕೆ ಮಾಡುವುದರ ಮೂಲಕ, ಮಾನವ ಸಂಪನ್ಮೂಲಗಳ ಲಭ್ಯತೆ, ಕಾರ್ಯಕ್ಷಮತೆಯನ್ನು ಸುಧಾರಿಸುವ ಮೂಲಕ, ಸರ್ಕಾರಿ ಪ್ರಾಥಮಿಕ ಆರೋಗ್ಯ ಸೇವೆ ವ್ಯವಸ್ಥೆಗಳ ವಿಶ್ವಾಸಾರ್ಹತೆಯನ್ನು ಸುಧಾರಿಸುವಲ್ಲಿ ಮತ್ತು ಮಧುಮೇಹ, ಅಧಿಕ ರಕ್ತದೊತ್ತಡದ ಬಗ್ಗೆ ಹೆಚ್ಚಿನ ಆದ್ಯತೆ ನೀಡುವಲ್ಲಿ ಸ್ಥಳೀಯ ಆರೋಗ್ಯ ವ್ಯವಸ್ಥೆಯ ಯೋಜಕರು, ವ್ಯವಸ್ಥಾಪಕರು ಸಮರ್ಪಕವಾಗಿ ತಮ್ಮ ಪಾತ್ರ ನಿರ್ವಹಿಸಬೇಕು. ರಾಜ್ಯ ಸರ್ಕಾರವು ಇದನ್ನು ಸಾಧ್ಯವಾಗಿಸುವ ನಿಟ್ಟಿನಲ್ಲಿ ತುರ್ತು ಗಮನ ಹರಿಸಬೇಕು ಎಂಬುದು ಈ ಅಧ್ಯಯನದಿಂದ ಮನದಟ್ಟಾಗಿದೆ.

Kannada

Recent Stories

ಲೇಖಕರು
Research Matters
Lockeia gigantus trace fossils found from Fort Member. Credit: Authors

ಜೈ ನಾರಾಯಣ್ ವ್ಯಾಸ್ ವಿಶ್ವವಿದ್ಯಾಲಯದ ಸಂಶೋಧಕರು ಜೈಸಲ್ಮೇರ್ ನಗರದ ಬಳಿಯ ಜೈಸಲ್ಮೇರ್ ರಚನೆಯಲ್ಲಿ ಲಾಕಿಯಾ ಜೈಗ್ಯಾಂಟಸ್ ಪಳೆಯುಳಿಕೆಗಳನ್ನು ಕಂಡುಹಿಡಿದಿದ್ದಾರೆ. ಇದು ಭಾರತದಿಂದ ಇಂತಹ ಪಳೆಯುಳಿಕೆಗಳ ಮೊದಲ ದಾಖಲೆ ಮಾತ್ರವಲ್ಲ, ಇದುವರೆಗೆ ಪತ್ತೆಯಾದ ಅತಿದೊಡ್ಡ ಲಾಕಿಯಾ ಕುರುಹುಗಳು.

ಲೇಖಕರು
Research Matters
ಇಂಡೋ-ಬರ್ಮೀಸ್ ಪ್ಯಾಂಗೊಲಿನ್ (ಮನಿಸ್ ಇಂಡೋಬರ್ಮಾನಿಕಾ). ಕೃಪೆ: ವಾಂಗ್ಮೋ, ಎಲ್.ಕೆ., ಘೋಷ್, ಎ., ಡೋಲ್ಕರ್, ಎಸ್. ಮತ್ತು ಇತರರು.

ಕಳ್ಳತನದಿಂದ ಸಾಗಾಟವಾಗುತ್ತಿದ್ದ ಹಲವು ಪ್ರಾಣಿಗಳ ನಡುವೆ ಪ್ಯಾಂಗೋಲಿನ್ ನ ಹೊಸ ಪ್ರಭೇದವನ್ನು ಪತ್ತೆ ಮಾಡಲಾಗಿದೆ.

ಲೇಖಕರು
Research Matters
Lockeia gigantus trace fossils found from Fort Member. Credit: Authors

ಜೈ ನಾರಾಯಣ್ ವ್ಯಾಸ್ ವಿಶ್ವವಿದ್ಯಾಲಯದ ಸಂಶೋಧಕರು ಜೈಸಲ್ಮೇರ್ ನಗರದ ಬಳಿಯ ಜೈಸಲ್ಮೇರ್ ರಚನೆಯಲ್ಲಿ ಲಾಕಿಯಾ ಜೈಗ್ಯಾಂಟಸ್ ಪಳೆಯುಳಿಕೆಗಳನ್ನು ಕಂಡುಹಿಡಿದಿದ್ದಾರೆ. ಇದು ಭಾರತದಿಂದ ಇಂತಹ ಪಳೆಯುಳಿಕೆಗಳ ಮೊದಲ ದಾಖಲೆ ಮಾತ್ರವಲ್ಲ, ಇದುವರೆಗೆ ಪತ್ತೆಯಾದ ಅತಿದೊಡ್ಡ ಲಾಕಿಯಾ ಕುರುಹುಗಳು.

ಲೇಖಕರು
Research Matters
ಇಂಡೋ-ಬರ್ಮೀಸ್ ಪ್ಯಾಂಗೊಲಿನ್ (ಮನಿಸ್ ಇಂಡೋಬರ್ಮಾನಿಕಾ). ಕೃಪೆ: ವಾಂಗ್ಮೋ, ಎಲ್.ಕೆ., ಘೋಷ್, ಎ., ಡೋಲ್ಕರ್, ಎಸ್. ಮತ್ತು ಇತರರು.

ಕಳ್ಳತನದಿಂದ ಸಾಗಾಟವಾಗುತ್ತಿದ್ದ ಹಲವು ಪ್ರಾಣಿಗಳ ನಡುವೆ ಪ್ಯಾಂಗೋಲಿನ್ ನ ಹೊಸ ಪ್ರಭೇದವನ್ನು ಪತ್ತೆ ಮಾಡಲಾಗಿದೆ.

ಲೇಖಕರು
Research Matters
ಸ್ಪರ್ಶರಹಿತ ಬೆರಳಚ್ಚು ಸಂವೇದಕದ ಪ್ರಾತಿನಿಧಿಕ ಚಿತ್ರ

ಸಾಧಾರಣವಾಗಿ, ಫೋನ್ ಅನ್ನು ಅನ್ಲಾಕ್ ಮಾಡುವಾಗ ಅಥವಾ ಕಛೇರಿಯಲ್ಲಿ ಬಯೋಮೆಟ್ರಿಕ್ ಸ್ಕ್ಯಾನರುಗಳನ್ನು ಬಳಸುವಾಗ, ನಿಮ್ಮ ಬೆರಳನ್ನು ಸ್ಕ್ಯಾನರಿನ ಮೇಲ್ಮೈಗೆ ಒತ್ತ ಬೇಕಾಗುತ್ತದೆ. ಬೆರಳಚ್ಚುಗಳನ್ನು ಸೆರೆಹಿಡಿಯುವುದು ಹೀಗೆ. ಆದರೆ, ಹೊಸ ಸಂಶೋಧನೆಯೊಂದು ಈ ಪ್ರಕ್ರಿಯೆಯನ್ನು ಇನ್ನಷ್ಟು ಸ್ವಚ್ಛ, ಸುಲಭ ಮತ್ತು ಹೆಚ್ಚು ನಿಖರವಾಗಿಸುವ ವಿಧಾನವನ್ನು ರೂಪಿಸಿದೆ. ಸಾಧನವನ್ನು ಮುಟ್ಟದೆಯೇ ಬೆರಳಚ್ಚನ್ನು ಸಂಗ್ರಹಿಸುವ ಮಾರ್ಗವನ್ನು ಹುಡುಕಿದೆ.

ಲೇಖಕರು
Research Matters
ಮೈಕ್ರೋಸಾಫ್ಟ್ ಡಿಸೈನರ್ ನ ಇಮೇಜ್ ಕ್ರಿಯೇಟರ್ ಬಳಸಿ ಚಿತ್ರ ರಚಿಸಲಾಗಿದೆ

ಐಐಟಿ ಬಾಂಬೆಯ ಸಂಶೋಧಕರು ಶಾಕ್‌ವೇವ್-ಆಧಾರಿತ ಸೂಜಿ-ಮುಕ್ತ ಸಿರಿಂಜ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಮೂಲಕ ಸೂಜಿಗಳಿಲ್ಲದೆ ಔಷಧಿಗಳನ್ನು ಪೂರೈಸುವ ಮಾರ್ಗವನ್ನು ಕಂಡುಹಿಡಿದಿದ್ದಾರೆ.

ಲೇಖಕರು
Research Matters
ಅತ್ಯಂತ ಪ್ರಾಚೀನ ವಸ್ತುವಿನ ಅಧ್ಯಯನ

ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

ಲೇಖಕರು
Research Matters
ಕಾಂಕ್ರೀಟ್‌ ಪರೀಕ್ಷೆಗೆ ಪ್ರೋಬ್‌

ಕಾಂಕ್ರೀಟ್‌ನಲ್ಲಿ ಹುದುಗಿರುವ ರೆಬಾರ್‌ಗಳಲ್ಲಿನ ತುಕ್ಕು ಪ್ರಮಾಣವನ್ನು ಮಾಪಿಸಲು ವಿಜ್ಞಾನಿಗಳು ಒಂದು ಹೊಸ ತಪಾಸಕವನ್ನು ಅಭಿವೃದ್ಧಿಪಡಿಸಿದ್ದಾರೆ.

ಲೇಖಕರು
Research Matters
‘ದ್ವಿಪಾತ್ರ’ದಲ್ಲಿ ಮೈಕ್ರೋ ಆರ್‌ಎನ್‌ಎ

ವೈರಲ್ ಸೋಂಕುಗಳು ಮತ್ತು ಸ್ವಯಂ ನಿರೋಧಕ ಕಾಯಿಲೆಗಳಲ್ಲಿ ಮೈಕ್ರೋ ಆರ್‌ಎನ್‌ಎ ‘ದ್ವಿಪಾತ್ರ’ದಲ್ಲಿ ಕೆಲಸ ಮಾಡುತ್ತದೆ. 

ಲೇಖಕರು
Research Matters
ರೀಚಾರ್ಜ್ ಮಾಡಬಹುದಾದ ಬ್ಯಾಟರಿಗಳು

ಐಐಟಿ ಬಾಂಬೆ ಯ ಬ್ಯಾಟರಿ ಪ್ರೋಟೋಟೈಪಿಂಗ್ ಲ್ಯಾಬ್ ನ ಸಂಶೋಧಕರು ಇಂಧನ (ಶಕ್ತಿ) ಶೇಖರಣಾ ಸಾಧನವಾಗಿರುವ ರೀಚಾರ್ಜ್ ಮಾಡಬಹುದಾದ ಬ್ಯಾಟರಿಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ. 

Loading content ...
Loading content ...
Loading content ...
Loading content ...
Loading content ...